ಬ್ರೇಕಿಂಗ್ ನ್ಯೂಸ್
03-07-25 11:03 pm Mangalore Correspondent ಕ್ರೈಂ
ಪುತ್ತೂರು, ಜುಲೈ 3 : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು ಇದೇ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಫೋನಾಯಿಸಿ ದೂರು ಹೇಳಿದ್ದಾರೆ.

ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ಎಷ್ಟೇ ಖರ್ಚಾಗಲಿ ಸಂತ್ರಸ್ತೆಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು. ಇಲ್ಲೀವರೆಗೆ ಸಂತ್ರಸ್ತೆಗೆ ಒಬ್ಬರು ತಾಯಿ ಇದ್ದರು. ಇನ್ಮೇಲೆ ನಾನು ಕೂಡ ತಾಯಿ. ಸಂತ್ರಸ್ತೆ ಕುಟುಂಬದ ಖರ್ಚು ವೆಚ್ಚವನ್ನೆಲ್ಲ ನಾನು ಭರಿಸುತ್ತೇನೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ಮಾಡುತ್ತೇನೆ. ಸಂತ್ರಸ್ತೆ ಕುಟುಂಬದ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸ ನನ್ನದು ಎಂದರು.
ಸಂತ್ರಸ್ತೆ ತಾಯಿ ಜೊತೆ ಮಾತನಾಡುವ ವೇಳೆ ನಿಮ್ಮ ಜೊತೆ ನಾನಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ, ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ, ‘ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ, ಇವತ್ತಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು ಎಂದು ಹೇಳಿ ಸಂತ್ರಸ್ತೆ ತಾಯಿ ಮುಖಕ್ಕೆ ಹಾಕಿದ್ದ ಮಾಸ್ಕ್ ಅನ್ನು ಪ್ರತಿಭಾ ಕುಳಾಯಿ ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಯಾವುದೇ ಕಾರಣಕ್ಕೂ ಮಹಿಳೆಯಾದವಳು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಟ ಮಾಡಬೇಕು ಎಂದರು.
ಇದೇ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಜೊತೆ ಸಂತ್ರಸ್ತೆಯ ತಾಯಿ ನಮಿತಾ ಫೋನಲ್ಲಿ ಮಾತನಾಡಿದರು. ಈ ವೇಳೆ ನ್ಯಾಯ ದೊರಕಿಸಿ ಕೊಡುವಂತೆ ಸಂತ್ರಸ್ತೆಯ ತಾಯಿ ನಮಿತಾ ಕೇಳಿಕೊಂಡರು. ಫೋನ್ ಸಂಭಾಷಣೆಯಲ್ಲಿ ಧೈರ್ಯ ಹೇಳಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
The Karnataka State Women’s Commission chairperson Nagalakshmi Chaudhary personally intervened by calling the victim—who is pregnant after being abandoned by the son of BJP leader Jagannivas Rao—and assured her of support and justice.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm