ಬ್ರೇಕಿಂಗ್ ನ್ಯೂಸ್
04-07-25 06:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದೇಶದಲ್ಲಿದ್ದ ರಹಿಮಾನ್ ಕತಾರ್ ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಎನ್ಐಎ ಬಲೆಗೆ ಕೆಡವಿದೆ.
ಇದೇ ಎಪ್ರಿಲ್ ತಿಂಗಳಲ್ಲಿ ಅಬ್ದುಲ್ ರಹಿಮಾನ್ ಸೇರಿದಂತೆ ಮೂವರು ತಲೆಮರೆಸಿಕೊಂಡಿದ್ದವರು ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿಯ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಪ್ರಕಟಿಸಿತ್ತು. ಅಬ್ದುಲ್ ರಹಿಮಾನ್ ಹೆಸರಲ್ಲಿ ನಾಲ್ಕು ಲಕ್ಷ ಬಹುಮಾನ ಘೋಷಣೆಯಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಎನ್ಐಎ ಬಂಧನ ಮಾಡುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಬ್ದುಲ್ ರಹಿಮಾನ್, ಸದ್ದಿಲ್ಲದೆ ವಿದೇಶಕ್ಕೆ ಹಾರಿದ್ದ.
ಈ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎ ಲುಕೌಟ್ ನೋಟಿಸ್ ಜಾರಿ ಮಾಡಿತ್ತು. ಇದೀಗ ಕತಾರ್ ಏರ್ಪೋರ್ಟ್ ನಿಂದ ನೇರ ವಿಮಾನದಲ್ಲಿ ಕೇರಳದ ಕಣ್ಣೂರಿಗೆ ಬಂದಿಳಿಯುತ್ತಿದ್ದಾಗಲೇ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು, ಅಲ್ಲಿಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆಯಂತೆ ಅಬ್ದುಲ್ ರಹಿಮಾನ್ ಮತ್ತು ಇತರರು ಸೇರಿ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು. ಪ್ರಕರಣದಲ್ಲಿ ಒಟ್ಟು 28 ಮಂದಿಯ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯಪಡಿಸುವುದು ಮತ್ತು ಸಮಾಜದಲ್ಲಿ ಕೋಮು ದ್ವೇಷದ ಗಲಾಟೆ ಎಬ್ಬಿಸುವ ಉದ್ದೇಶದಿಂದ ಕೊಲೆ ನಡೆಸಲಾಗಿತ್ತು ಎಂದು ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿತ್ತು.
In a major breakthrough in the Praveen Nettaru murder case, the National Investigation Agency (NIA) has arrested one of the key accused, Abdul Rahiman, who had been absconding abroad for nearly two years. He was taken into custody by NIA officials at Kerala’s Kannur International Airport upon his arrival from Qatar.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm