ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm