ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm