ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm