ಬ್ರೇಕಿಂಗ್ ನ್ಯೂಸ್
07-07-25 12:20 pm Mangalore Correspondent ಕ್ರೈಂ
ಪುತ್ತೂರು, ಜು.7 : ಪುತ್ತೂರ ತಾಲೂಕಿನ ಬಿರುಮಲೆಬೆಟ್ಟ ಎಂಬಲ್ಲಿ ಅಪ್ರಾಪ್ತ ಯುವಕ- ಯುವತಿ ಜೊತೆಗಿರುವುದನ್ನು ಕಂಡು ಅನ್ಯಧರ್ಮದ ಯುವಕನೆಂದು ಭ್ರಮಿಸಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ನೀನು ಬ್ಯಾರಿಯಲ್ವಾ ಎಂದು ಹೇಳಿ ನಿಂದಿಸಿದ್ದು ಘಟನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಮಾಹಿತಿ ನೀಡಿದ್ದು, ಜುಲೈ 5ರಂದು ಮಧ್ಯಾಹ್ನ ಬಿರುಮಲೆಗುಡ್ಡದಲ್ಲಿ ಹುಡುಗ - ಹುಡುಗಿ ಬೈಕ್ ನಲ್ಲಿ ಓಡಾಡುತ್ತಿದ್ದರು. ಇದೇ ಸಂದರ್ಭ ಇಬ್ಬರು ಅಪರಿಚಿತ ವ್ಯಕ್ತಿಗಳು ಜೋಡಿಗಳನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡ್ತೀವಿ ಎಂದು ಬೆದರಿಕೆವೊಡ್ಡಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ನೀವು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಹುಡುಗನ ತಂದೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43) ಹಾಗೂ ಪುತ್ತೂರಿನ ಆರ್ಯಾಪು ನಿವಾಸಿ ರಾಮಚಂದ್ರ (38) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಬಿರುಮಲೆಗುಡ್ಡೆ ಪ್ರದೇಶಕ್ಕೆ ಕಾಲೇಜು ವಿದ್ಯಾರ್ಥಿಗಳು ಬರುವುದು, ಸುತ್ತಾಡುವುದು ಸಾಮಾನ್ಯ. ಅನ್ಯಧರ್ಮದ ಯುವಕರು ಹಿಂದು ಹುಡುಗಿಯರ ಜೊತೆಗೆ ಬರುತ್ತಾರೆಂಬ ಗುಮಾನಿಯಲ್ಲಿ ಈ ಹಿಂದೆಯೂ ನೈತಿಕ ಪೊಲೀಸರಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ರಿ ಘಟನೆಯಲ್ಲಿ ಯುವಕ- ಯುವತಿ ಅಪ್ರಾಪ್ತರಾಗಿರುವುದರಿಂದ ಇವರ ವಿಡಿಯೋ ಜಾಲತಾಣದಲ್ಲಿ ಪ್ರಸಾರ ಮಾಡುವುದು ಕಾನೂನು ಬಾಹಿರ. ಹಾಗಾಗಿ, ನೈತಿಕ ಪೊಲೀಸ್ ಕೃತ್ಯದ ಜೊತೆಗೆ ವಿಡಿಯೋ ತೆಗೆದು ವೈರಲ್ ಮಾಡಿದ ಬಗ್ಗೆಯೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
‘Moral policing’ resurfaced in Dakshina Kannada with the incident of two persons allegedly waylaying two minors, a boy and a girl, insulting them in public and posting the video of the insult on social media in Puttur on Saturday.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am