ಬ್ರೇಕಿಂಗ್ ನ್ಯೂಸ್
07-07-25 12:20 pm Mangalore Correspondent ಕ್ರೈಂ
ಪುತ್ತೂರು, ಜು.7 : ಪುತ್ತೂರ ತಾಲೂಕಿನ ಬಿರುಮಲೆಬೆಟ್ಟ ಎಂಬಲ್ಲಿ ಅಪ್ರಾಪ್ತ ಯುವಕ- ಯುವತಿ ಜೊತೆಗಿರುವುದನ್ನು ಕಂಡು ಅನ್ಯಧರ್ಮದ ಯುವಕನೆಂದು ಭ್ರಮಿಸಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ನೀನು ಬ್ಯಾರಿಯಲ್ವಾ ಎಂದು ಹೇಳಿ ನಿಂದಿಸಿದ್ದು ಘಟನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಮಾಹಿತಿ ನೀಡಿದ್ದು, ಜುಲೈ 5ರಂದು ಮಧ್ಯಾಹ್ನ ಬಿರುಮಲೆಗುಡ್ಡದಲ್ಲಿ ಹುಡುಗ - ಹುಡುಗಿ ಬೈಕ್ ನಲ್ಲಿ ಓಡಾಡುತ್ತಿದ್ದರು. ಇದೇ ಸಂದರ್ಭ ಇಬ್ಬರು ಅಪರಿಚಿತ ವ್ಯಕ್ತಿಗಳು ಜೋಡಿಗಳನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡ್ತೀವಿ ಎಂದು ಬೆದರಿಕೆವೊಡ್ಡಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ನೀವು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಹುಡುಗನ ತಂದೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43) ಹಾಗೂ ಪುತ್ತೂರಿನ ಆರ್ಯಾಪು ನಿವಾಸಿ ರಾಮಚಂದ್ರ (38) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಬಿರುಮಲೆಗುಡ್ಡೆ ಪ್ರದೇಶಕ್ಕೆ ಕಾಲೇಜು ವಿದ್ಯಾರ್ಥಿಗಳು ಬರುವುದು, ಸುತ್ತಾಡುವುದು ಸಾಮಾನ್ಯ. ಅನ್ಯಧರ್ಮದ ಯುವಕರು ಹಿಂದು ಹುಡುಗಿಯರ ಜೊತೆಗೆ ಬರುತ್ತಾರೆಂಬ ಗುಮಾನಿಯಲ್ಲಿ ಈ ಹಿಂದೆಯೂ ನೈತಿಕ ಪೊಲೀಸರಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ರಿ ಘಟನೆಯಲ್ಲಿ ಯುವಕ- ಯುವತಿ ಅಪ್ರಾಪ್ತರಾಗಿರುವುದರಿಂದ ಇವರ ವಿಡಿಯೋ ಜಾಲತಾಣದಲ್ಲಿ ಪ್ರಸಾರ ಮಾಡುವುದು ಕಾನೂನು ಬಾಹಿರ. ಹಾಗಾಗಿ, ನೈತಿಕ ಪೊಲೀಸ್ ಕೃತ್ಯದ ಜೊತೆಗೆ ವಿಡಿಯೋ ತೆಗೆದು ವೈರಲ್ ಮಾಡಿದ ಬಗ್ಗೆಯೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
‘Moral policing’ resurfaced in Dakshina Kannada with the incident of two persons allegedly waylaying two minors, a boy and a girl, insulting them in public and posting the video of the insult on social media in Puttur on Saturday.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm