ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm