ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm