ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm