ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm