ಬ್ರೇಕಿಂಗ್ ನ್ಯೂಸ್
10-07-25 08:09 pm HK News Desk ಕ್ರೈಂ
ರಾಮನಗರ ಜು.10: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ನಡೆದಿದೆ.
ಘಟನೆ ನಡೆದ ಕೆಲವೇ ತಾಸುಗಳಲ್ಲಿ ಆರೋಪಿ ಯಲ್ಲಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ 25 ವರ್ಷದ ಯಲ್ಲಪ್ಪ ಕಟ್ಟಡ ಕಾರ್ಮಿಕ. ತಾವರೆಕೆರೆಯಲ್ಲಿ ಒಬ್ಬನೇ ನೆಲೆಸಿದ್ದ ಆರೋಪಿ, ಬಾಲಕಿ ಮನೆ ಬಳಿ ಆಗಾಗ ಬಂದು ಹೋಗುತ್ತಿದ್ದ. ದಂಪತಿ ಕೆಲಸಕ್ಕೆ ಮತ್ತು ಅವರ ಮಕ್ಕಳು ಶಾಲೆಗೆ ಹೋದ ನಂತರ, ಬಾಲಕಿ ಒಬ್ಬಳೇ ಮನೆಯಲ್ಲಿರುವುದನ್ನು ಅರಿತಿದ್ದ.
ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಬೈಕ್ನಲ್ಲಿ ಬಾಲಕಿ ಮನೆಗೆ ಬಂದಿದ್ದ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಬಲವಾದ ಪ್ರತಿರೋಧ ತೋರಿ ಕೂಗಿಕೊಳ್ಳಲು ಯತ್ನಿಸಿದ್ದಾಳೆ. ಆಗ ಆರೋಪಿ, ಎಲ್ಲಿ ತಾನು ಸಿಕ್ಕಿ ಬೀಳುತ್ತೆನೊ ಎಂಬ ಭಯದಿಂದ ಮನೆಯೊಳಗೆ ಇದ್ದ ದೊಣ್ಣೆಯಿಂದ ತಲೆ ಮತ್ತು ಮುಖಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮನೆಯಿಂದ ಹಾಗೆಯೇ ಹೋದರೆ ಯಾರಿಗಾದರೂ ಅನುಮಾನ ಬರಲಿದೆ ಅಂದುಕೊಂಡು, ಒಳಗಿದ್ದ ಸಿಲಿಂಡರ್ ತೆಗೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ 2ರ ಸುಮಾರಿಗೆ ಬಾಲಕಿ ಸಹೋದರ ಮನೆಗೆ ಬಂದಾಗ ತನ್ನ ಅಕ್ಕ ಅರೆ ನಗ್ನಾವಸ್ಥೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದ.
ಸುಳಿವು ಕೊಟ್ಟ ಕ್ಯಾಮೆರಾ ;
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆಗ ಆರೋಪಿ ಯಲ್ಲಪ್ಪ ಬೈಕ್ನಲ್ಲಿ ಮನೆ ಬಳಿ ಬಂದು, ಕೆಲ ನಿಮಿಷದ ಬಳಿಕ ಅನುಮಾನಾಸ್ಪದವಾಗಿ ಸಿಲಿಂಡರ್ನೊಂದಿಗೆ ಹೋಗುವುದು ಗೊತ್ತಾಯಿತು. ಆತನ ಮಾಹಿತಿ ವಿವರ ಕಲೆಹಾಕಿ ರಾತ್ರಿಯೇ ಆತನನ್ನು ವಶಕ್ಕೆ ಪಡೆಯಲಾಗಿದೆ.
In a horrifying incident near Bengaluru, a 14-year-old girl was brutally raped and murdered in Tavarekere town while she was alone at home. The accused, identified as 25-year-old Yallappa, was arrested by police within hours of the crime, thanks to a key clue involving a stolen gas cylinder.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm