ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm