ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm