ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm