ಬ್ರೇಕಿಂಗ್ ನ್ಯೂಸ್
11-07-25 10:10 pm HK News Desk ಕ್ರೈಂ
ಕಲಬುರಗಿ, ಜುಲೈ 11: ಕಲಬುರಗಿಯಲ್ಲಿ ಹಾಡಹಗಲೇ ಚಿನ್ನಾಭರಣ ತಯಾರಿಕಾ ಅಂಗಡಿಯನ್ನು ದೋಚಲಾಗಿದೆ. ನಗರದ ಸರಾಫ್ ಬಜಾರ್ನಲ್ಲಿ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನುಗ್ಗಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆ ಮಾಡಿರುವ ಘಟನೆ ನಡೆದಿದೆ.
ಮಾಲಿಕ್ ಎಂಬ ಹೆಸರಿನ ಚಿನ್ನದ ಆಭರಣ ತಯಾರಿಸುವ ಅಂಗಡಿಗೆ ನಾಲ್ವರು ಮುಸುಕುಧಾರಿ ದರೋಡೆಕೋರರು ಗನ್ ಹಾಗೂ ಚಾಕು ಸಹಿತ ನುಗ್ಗಿ, ಅಂಗಡಿ ಮಾಲಿಕರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿದ್ದಾರೆ. ಅಂದಾಜು 3 ಕೆಜಿಯಷ್ಟು ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದರೋಡೆಕೋರರ ಬಂಧನಕ್ಕೆ ಬಲೆ
ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಪ್ರತಿಕ್ರಿಯಿಸಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಬೆರಳಚ್ಚು ತಜ್ಞರು ಹಾಗೂ ಡಾಗ್ ಸ್ಕ್ವಾಡ್ ಕರೆಸಿ ಪರಿಶೀಲನೆ ನಡೆಸಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ದುಷ್ಕರ್ಮಿಗಳ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ದರೋಡೆಕೋರರ ಕೈಗೆ ಸಿಲುಕಿದ ವ್ಯಕ್ತಿಯ ಸಹೋದರ ಮರ್ತುಲ್ಲಾ ಮಾಲಿಕ್, ನನ್ನ ಸಹೋದರ ಸುಮಾರು 12 ಗಂಟೆ ವೇಳೆಗೆ ಅಂಗಡಿ ಬಾಗಿಲು ತೆರೆದು ಕುರ್ಚಿಯಲ್ಲಿ ಕುಳಿತಿದ್ದರು. ಆಗ ನಾಲ್ಕು ಜನ ಮುಸುಕುಧಾರಿಗಳು ನಮ್ಮ ಅಂಗಡಿಗೆ ನುಗ್ಗಿದ್ದರು. ಅದರಲ್ಲಿ ಇಬ್ಬರು ಬಂದೂಕು ತೋರಿಸಿ ಬೆದರಿಸಿದ್ದರು, ಅಷ್ಟರಲ್ಲಿ ಮತ್ತೊಬ್ಬ ಚಾಕು ತೋರಿಸಿದ್ದ, ಆ ಬಳಿಕ ಹಗ್ಗದಿಂದ ಅವರ ಕೈಕಾಲು ಕಟ್ಟಿ, ಲಾಕರ್ ತೆರೆಸಿ, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿದರು.
In a shocking daylight heist, a group of masked robbers stormed into a gold ornament manufacturing unit in Saraf Bazaar, Kalaburagi, and looted gold and cash worth crores.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm