ಬ್ರೇಕಿಂಗ್ ನ್ಯೂಸ್
12-07-25 11:59 am Mangalore Correspondent ಕ್ರೈಂ
ಮಂಗಳೂರು, ಜುಲೈ.12: ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ 250ಕ್ಕೂ ಹೆಚ್ಚು ಮಂದಿಯಲ್ಲಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬಂಧಿತರಾದ ಮುಂಬೈ ಮೂಲದ ಮೂವರು ಆರೋಪಿಗಳ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕೋಕಾ ಏಕ್ಟಿನಡಿ ಕೇಸು ದಾಖಲಿಸಿದ್ದಾರೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಬಗ್ಗೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಮತ್ತು ನವಿ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ಸಂಘಟಿತ ನೆಲೆಯಲ್ಲಿ ಅಪರಾಧ ನಡೆಸುತ್ತಿದ್ದಾರೆಂಬ ಆಧಾರದಲ್ಲಿ ಕರ್ನಾಟಕ ಕೋಕಾ ಏಕ್ಟ್ ಅಡಿ ಕೇಸು ದಾಖಲಿಸಲು ಕಮಿಷನರ್ ಸೂಚಿಸಿದ್ದಾರೆ. ಎರಡಕ್ಕಿಂತ ಹೆಚ್ಚು ಕಡೆ ಅಪರಾಧ ಪ್ರಕರಣ ದಾಖಲಾದರೆ ಕೋಕಾ ಏಕ್ಟ್ ಜಾರಿಗೊಳಿಸಬಹುದು. ಇದರ ಪ್ರಕಾರ, ಪೊಲೀಸರಿಗೆ ಮತ್ತಷ್ಟು ಬಲ ಬರುತ್ತದೆ. ಯಾರೇ ಆಗಲಿ ಎರಡಕ್ಕಿಂತ ಹೆಚ್ಚು ಕಡೆ ಕೇಸು ದಾಖಲಾದವರು ಜಾಗ್ರತೆಯಲ್ಲಿರಿ ಎಂದು ಕಮಿಷನರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಇತ್ತೀಚೆಗೆ ಸಿಸಿಬಿ ಪೊಲೀಸರು ನವಿ ಮುಂಬೈನ ಕೋಪರ್ ಕೈರಾನೆ ನಿವಾಸಿ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಥಾಣೆಯ ದೊಂಬಿವಿಲಿ ನಿವಾಸಿ ಕಿಶೋರ್ ಕುಮಾರ್ ಅಲಿಯಾಸ್ ಅನಿಲ್ ಕುಮಾರ್ (34) ಎಂಬವರನ್ನು ಬಂಧಿಸಲಾಗಿತ್ತು. ಇದಕ್ಕೂ ಹಿಂದೆ ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು ಬಂಧನ ಮಾಡಿದ್ದರು. ಇದೀಗ ಮೂವರ ವಿರುದ್ಧವೂ ಕೋಕಾ ಕಾಯ್ದೆಯಡಿ ಕೇಸು ದಾಖಲಾಗಿದೆ.
ಏನಿದು ಕೋಕಾ ಕಾಯ್ದೆ ?
ಸಂಘಟಿತ ಅಪರಾಧಗಳ ನಿಯಂತ್ರ ಕಾಯ್ದೆ 2000 ಪ್ರಕಾರ, ಕೇಸು ದಾಖಲಾದರೆ ಪೊಲೀಸರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಲು ಅವಕಾಶ ಸಿಗುತ್ತದೆ. ಆರೋಪಿಗಳನ್ನು ಒಂದು ತಿಂಗಳಿಗೂ ಹೆಚ್ಚು ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ಮತ್ತು 180 ದಿನಗಳ ಕಾಲ ಜೈಲಿನಲ್ಲಿರಿಸಲು ಅವಕಾಶ ಇರುತ್ತದೆ. ಹೀಗಾಗಿ ಆರೋಪಿಗಳಿಗೆ ಸುಲಭದಲ್ಲಿ ಜಾಮೀನು ಲಭ್ಯವಾಗದು. ಈ ಕಾಯ್ದೆಯಡಿ ವಿಶೇಷ ನ್ಯಾಯಾಲಯದಡಿ ಕೇಸು ದಾಖಲಿಸಲು ಅವಕಾಶ ಇದೆ. ಸಂಘಟಿತ ಅಪರಾಧ ಮತ್ತು ಭಯೋತ್ಪಾದನೆ ವಿರುದ್ಧ ಕ್ರಮ ಜರುಗಿಸಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ನಿಶ್ಚಿತ ಅಪರಾಧಗಳನ್ನೆಸಗಿದರೆ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲು ಅವಕಾಶ ಇರುತ್ತದೆ. ಮಹಾರಾಷ್ಟ್ರ ಸರಕಾರ ಜಾರಿಗೆ ತಂದಿದ್ದ ಮೋಕಾ ಕಾಯ್ದೆಯನ್ನು ಮಾದರಿಯಾಗಿಟ್ಟು ಕರ್ನಾಟಕದಲ್ಲಿ ಕೋಕಾ ಏಕ್ಟ್ ತರಲಾಗಿತ್ತು.
In a major crackdown on organized crime, Mangaluru City Police Commissioner Sudheer Kumar Reddy has invoked the Karnataka Control of Organised Crimes Act (KCOCA) against three individuals from Mumbai, accused of defrauding over 250 people by promising jobs abroad and collecting lakhs of rupees from them.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm