ಬ್ರೇಕಿಂಗ್ ನ್ಯೂಸ್
15-07-25 06:52 pm Bangalore Correspondent ಕ್ರೈಂ
ಬೆಂಗಳೂರು, ಜು 15 : ಡಾನ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಕರೆ ಮಾಡಿ ಬೆದರಿಸಿದ್ದ ನಾಲ್ವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ ದೇವ್ ಹಾಗೂ ಅಮಿತ್ ಚೌಧರಿ ಬಂಧಿತರು. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು. 'ಇಲ್ಲವಾದರೆ ನಿನ್ನ ಮಗನನ್ನು ಕಿಡ್ನಾಪ್ ಮಾಡುತ್ತೇವೆ' ಎಂದು ಬೆದರಿಸಿದ್ದರು. ಉದ್ಯಮಿಯ ಪುತ್ರ ನೀಡಿದ ದೂರಿನನ್ವಯ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆಗಾಗಿ ಕೇಂದ್ರ ವಿಭಾಗ ಮತ್ತು ಸಿಸಿಬಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡವನ್ನ ರಚಿಸಿದ್ದರು. ಅದರಂತೆ ಪ್ರಕರಣದ ತನಿಖೆ ಕೈಗೊಂಡ ತಂಡ ಜೆ.ಸಿ ರಸ್ತೆಯಲ್ಲಿ ಕಾರ್ ಸೌಂಡ್ ಆಕ್ಸೆಸರೀಸ್ಗಳನ್ನ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ರಫೀಕ್ನನ್ನ ಬಂಧಿಸಿದ್ದರು. ಆತ ನೀಡಿದ ಮಾಹಿತಿಯನ್ವಯ ಉತ್ತರ ಪ್ರದೇಶದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಷ್ಣೋಯ್ ಗ್ಯಾಂಗ್ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ:
ಪ್ರಕರಣವೊಂದರಲ್ಲಿ ದೆಹಲಿ ಪೊಲೀಸರಿಂದ ಬಂಧನವಾಗಿದ್ದ ಮೊಹಮ್ಮದ್ ರಫೀಕ್, ಕೆಲಕಾಲ ತಿಹಾರ್ ಜೈಲಿನಲ್ಲಿ ಕಳೆದಿದ್ದ. ಆ ಸಂದರ್ಭದಲ್ಲಿ ಉತ್ತರ ಪ್ರದೇಶ ಮೂಲದ ಉಳಿದ ಮೂವರು ಆರೋಪಿಗಳ ಪರಿಚಯವಾಗಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತೀಕಾರಕ್ಕಾಗಿ ಕೃತ್ಯ:
ಪ್ರಕರಣದ ದೂರುದಾರ ಉದ್ಯಮಿ ಹಾಗೂ ಇತರೆ ಮೂವರು ವ್ಯಕ್ತಿಗಳು ಸೇರಿ, ತನಗೆ ಸೈಟ್ ಹಾಗೂ ಕಾರು ಅಕ್ಸೆಸರೀಸ್ಗಳಲ್ಲಿನ ವ್ಯವಹಾರದಲ್ಲಿ ಮೋಸ ಮಾಡಿದ್ದರು. ಆದ್ದರಿಂದ ಬೆದರಿಕೆವೊಡ್ಡಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಉತ್ತರ ಪ್ರದೇಶದ ಇನ್ನೂ ಮೂವರು ಆರೋಪಿಗಳನ್ನ ಕರೆಯಿಸಿಕೊಂಡು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಗಳು ಕೃತ್ಯ ಎಸಗಲು ಪಿಸ್ತೂಲ್ ಮತ್ತು ಗುಂಡುಗಳೊಂದಿಗೆ ಬೆಂಗಳೂರಿಗೆ ಬಂದಿದ್ದೆವೆಂದು ತಿಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನ ವಶಪಡಿಸಿಕೊಳ್ಳುವುದು ಬಾಕಿ ಇದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a dramatic turn of events, Bengaluru police have arrested four individuals who impersonated members of the notorious Lawrence Bishnoi gang and attempted to extort ₹1 crore from a local businessman. The accused were nabbed by the Sheshadripuram Police following a swift investigation.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm