ಬ್ರೇಕಿಂಗ್ ನ್ಯೂಸ್
15-07-25 06:52 pm Bangalore Correspondent ಕ್ರೈಂ
ಬೆಂಗಳೂರು, ಜು 15 : ಡಾನ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಗೆ ಕರೆ ಮಾಡಿ ಬೆದರಿಸಿದ್ದ ನಾಲ್ವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮೊಹಮ್ಮದ್ ರಫೀಕ್, ಉತ್ತರ ಪ್ರದೇಶ ಮೂಲದ ಶಿಶುಪಾಲ್ ಸಿಂಗ್, ವಂಶ್ ಸಚ್ ದೇವ್ ಹಾಗೂ ಅಮಿತ್ ಚೌಧರಿ ಬಂಧಿತರು. ಆರೋಪಿಗಳಿಂದ ಒಂದು ಕಾರು, ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿಯೊಬ್ಬರಿಗೆ ಜುಲೈ 8ರಂದು ರಾತ್ರಿ ಕರೆ ಮಾಡಿದ್ದ ಆರೋಪಿಗಳು, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರ ಹೆಸರಿನಲ್ಲಿ ಬೆದರಿಸಿ ಒಂದು ಕೋಟಿ ರೂ ಹಣಕ್ಕೆ ಬೇಡಿಕೆಯಿಟ್ಟಿದ್ದರು. 'ಇಲ್ಲವಾದರೆ ನಿನ್ನ ಮಗನನ್ನು ಕಿಡ್ನಾಪ್ ಮಾಡುತ್ತೇವೆ' ಎಂದು ಬೆದರಿಸಿದ್ದರು. ಉದ್ಯಮಿಯ ಪುತ್ರ ನೀಡಿದ ದೂರಿನನ್ವಯ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ತನಿಖೆಗಾಗಿ ಕೇಂದ್ರ ವಿಭಾಗ ಮತ್ತು ಸಿಸಿಬಿಯ ಅಧಿಕಾರಿಗಳನ್ನೊಳಗೊಂಡ ಪ್ರತ್ಯೇಕ ತಂಡವನ್ನ ರಚಿಸಿದ್ದರು. ಅದರಂತೆ ಪ್ರಕರಣದ ತನಿಖೆ ಕೈಗೊಂಡ ತಂಡ ಜೆ.ಸಿ ರಸ್ತೆಯಲ್ಲಿ ಕಾರ್ ಸೌಂಡ್ ಆಕ್ಸೆಸರೀಸ್ಗಳನ್ನ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ರಫೀಕ್ನನ್ನ ಬಂಧಿಸಿದ್ದರು. ಆತ ನೀಡಿದ ಮಾಹಿತಿಯನ್ವಯ ಉತ್ತರ ಪ್ರದೇಶದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಿಷ್ಣೋಯ್ ಗ್ಯಾಂಗ್ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ:
ಪ್ರಕರಣವೊಂದರಲ್ಲಿ ದೆಹಲಿ ಪೊಲೀಸರಿಂದ ಬಂಧನವಾಗಿದ್ದ ಮೊಹಮ್ಮದ್ ರಫೀಕ್, ಕೆಲಕಾಲ ತಿಹಾರ್ ಜೈಲಿನಲ್ಲಿ ಕಳೆದಿದ್ದ. ಆ ಸಂದರ್ಭದಲ್ಲಿ ಉತ್ತರ ಪ್ರದೇಶ ಮೂಲದ ಉಳಿದ ಮೂವರು ಆರೋಪಿಗಳ ಪರಿಚಯವಾಗಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೂ ಆರೋಪಿತರಿಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತೀಕಾರಕ್ಕಾಗಿ ಕೃತ್ಯ:
ಪ್ರಕರಣದ ದೂರುದಾರ ಉದ್ಯಮಿ ಹಾಗೂ ಇತರೆ ಮೂವರು ವ್ಯಕ್ತಿಗಳು ಸೇರಿ, ತನಗೆ ಸೈಟ್ ಹಾಗೂ ಕಾರು ಅಕ್ಸೆಸರೀಸ್ಗಳಲ್ಲಿನ ವ್ಯವಹಾರದಲ್ಲಿ ಮೋಸ ಮಾಡಿದ್ದರು. ಆದ್ದರಿಂದ ಬೆದರಿಕೆವೊಡ್ಡಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಉತ್ತರ ಪ್ರದೇಶದ ಇನ್ನೂ ಮೂವರು ಆರೋಪಿಗಳನ್ನ ಕರೆಯಿಸಿಕೊಂಡು ಕೃತ್ಯ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಗಳು ಕೃತ್ಯ ಎಸಗಲು ಪಿಸ್ತೂಲ್ ಮತ್ತು ಗುಂಡುಗಳೊಂದಿಗೆ ಬೆಂಗಳೂರಿಗೆ ಬಂದಿದ್ದೆವೆಂದು ತಿಳಿಸಿರುವ ಹಿನ್ನೆಲೆಯಲ್ಲಿ ಅವುಗಳನ್ನ ವಶಪಡಿಸಿಕೊಳ್ಳುವುದು ಬಾಕಿ ಇದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
In a dramatic turn of events, Bengaluru police have arrested four individuals who impersonated members of the notorious Lawrence Bishnoi gang and attempted to extort ₹1 crore from a local businessman. The accused were nabbed by the Sheshadripuram Police following a swift investigation.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm