ಬ್ರೇಕಿಂಗ್ ನ್ಯೂಸ್
24-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.24 : ಡಿವೈಎಫ್ಐ ಕಾರ್ಯಕರ್ತನನ್ನು ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆಗೈದ ಘಟನೆ ಬುಧವಾರ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡ ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ರಹ್ಮಾನ್ ಅವರಿಗೆ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹ್ಮಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಪ್ರಯೋಜನ ಆಗಲಿಲ್ಲ. ರಹ್ಮಾನ್ ಜೊತೆಗಿದ್ದ ಶುಹೈಬ್ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಲಾಗಿದೆ.

ಕೃತ್ಯದ ಸಂದರ್ಭ ಇನ್ನೋರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್ ( 26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಇದೆ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹರತಾಳಕ್ಕೆ ಡಿವೈಎಫ್ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯ ನಡೆದಿದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭ ಡಿವೈಎಫ್ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ. ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
An activist of DYFI was stabbed to death at Kanhangad in the district on the night of Wednesday December 23. The deceased is identified as Abdul Rahman (29).
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm