ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am