ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am