ಬ್ರೇಕಿಂಗ್ ನ್ಯೂಸ್
26-07-25 09:35 pm HK News Desk ಕ್ರೈಂ
ಬೆಳಗಾವಿ, ಜುಲೈ 26 : ಸೈಬರ್ ವಂಚಕರ ಜಾಲದ ಖದೀಮರಿಗಾಗಿ ನಕಲಿ ದಾಖಲೆಗಳನ್ನು ಮುಂದಿಟ್ಟು ಬ್ಯಾಂಕ್ ಖಾತೆಗಳನ್ನು ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಚೆನ್ನೈ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ನ ಬಿಬಿಎ ಪದವೀಧರ ಸರ್ವೇಶ ಕಿಣಿ, ಕುವೆಂಪು ನಗರದ ಅನಿಲ್ ಕೊಲ್ಲಾಪುರ, ಗಣೇಶಪುರದ ರೋಹನ್ ಕಾಂಬಳೆ ಬಂಧಿತರು. ಕರ್ನಾಟಕದಲ್ಲಿ ಮೂರು ಸೇರಿ ಈ ಮೂವರ ವಿರುದ್ಧ ದೇಶದ ವಿವಿಧ ಠಾಣೆಗಳಲ್ಲಿ 27 ಕೇಸ್ ದಾಖಲಾಗಿದೆ. ಕಮಿಷನ್ ಆಸೆ ಹುಟ್ಟಿಸಿ ಬ್ಯಾಂಕ್ ನಲ್ಲಿ ಕರೆಂಟ್ ಅಕೌಂಟ್ ತೆರೆದು ಕೊಡುವಂತೆ ಇಬ್ಬರಿಗೂ ಸರ್ವೇಶ್ ಪ್ರಚೋದನೆ ಮಾಡುತ್ತಿದ್ದ.



ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ಗೆ ನಕಲಿ ದಾಖಲೆ ಕೊಟ್ಟು ಕರೆಂಟ್ ಅಕೌಂಟ್ ತೆರೆಯುತ್ತಿದ್ದ ರೋಹನ್ ಮತ್ತು ಅನಿಲ್ ಅವುಗಳನ್ನು ಸರ್ವೇಶ್ ಮೂಲಕ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು. ಈ ಬ್ಯಾಂಕ್ ಖಾತೆಗಳ ಪಾಸ್ ಬುಕ್, ಅಕೌಂಟ್ ನಂಬರ್, ಎಟಿಎಂ ಕಾರ್ಡ್ ಗಳನ್ನು ಸರ್ವೇಶ್ ಗೆ ನೀಡಿದ್ದರು. ಇವರು ಮಾಡಿಕೊಡುತ್ತಿದ್ದ ಬ್ಯಾಂಕ್ ಅಕೌಂಟ್ ಗಳನ್ನು ಸರ್ವೇಶ್ ಸೈಬರ್ ವಂಚಕರಿಗೆ ನೀಡಿದ್ದ.
ಸೈಬರ್ ವಂಚಕರು ಅಮಾಯಕರ ಖಾತೆಗಳನ್ನು ಹ್ಯಾಕ್ ಮಾಡಿ, ಅದರಲ್ಲಿರುವ ಹಣವನ್ನು ಇವರು ಕೊಡುತ್ತಿದ್ದ ಅಕೌಂಟ್ಗೆ ವರ್ಗಾಯಿಸಿಕೊಳ್ತಿದ್ದರು. ಬಳಿಕ ಈ ಹಣವನ್ನು ಬೇರೆ ಬೇರೆ ಅಕೌಂಟ್ಗೆ ವರ್ಗಾವಣೆ ಮಾಡುತ್ತಿದ್ದುದು, ಹಣವನ್ನು ವಿತ್ ಡ್ರಾ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರ ಖಾತೆಯಲ್ಲಿ ಒಂದು ಕೋಟಿ ಹಣ ವರ್ಗಾವಣೆಯಾದಲ್ಲಿ 60 ಸಾವಿರ ಕಮಿಷನ್ ನೀಡುವುದಾಗಿ ಅನಿಲ್ ಮತ್ತು ರೋಹನ್ಗೆ ಆಮಿಷ ಒಡ್ಡಲಾಗಿತ್ತು. 10 ಕೋಟಿಗೂ ಅಧಿಕ ಹಣ ಬೆಳಗಾವಿಯಲ್ಲಿದ್ದ ವಂಚಕರ ಖಾತೆಗೆ ಬಂದಿರುವ ಶಂಕೆಯಿದ್ದು ಮೂವರನ್ನೂ ಪೊಲೀಸರು ಬಂಧಿಸಿ ಚೆನ್ನೈಗೆ ಕರೆದೊಯ್ದಿದ್ದಾರೆ.
Three individuals have been arrested by Chennai police in Belagavi for providing fake bank accounts to cyber fraudsters. The accused allegedly facilitated fraudulent transactions running into crores by supplying fake documents to open bank accounts on behalf of cybercriminals.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm