ಬ್ರೇಕಿಂಗ್ ನ್ಯೂಸ್
26-07-25 09:35 pm HK News Desk ಕ್ರೈಂ
ಬೆಳಗಾವಿ, ಜುಲೈ 26 : ಸೈಬರ್ ವಂಚಕರ ಜಾಲದ ಖದೀಮರಿಗಾಗಿ ನಕಲಿ ದಾಖಲೆಗಳನ್ನು ಮುಂದಿಟ್ಟು ಬ್ಯಾಂಕ್ ಖಾತೆಗಳನ್ನು ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಚೆನ್ನೈ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಬೆಳಗಾವಿ ನಗರದ ಆರ್ಪಿಡಿ ಕ್ರಾಸ್ನ ಬಿಬಿಎ ಪದವೀಧರ ಸರ್ವೇಶ ಕಿಣಿ, ಕುವೆಂಪು ನಗರದ ಅನಿಲ್ ಕೊಲ್ಲಾಪುರ, ಗಣೇಶಪುರದ ರೋಹನ್ ಕಾಂಬಳೆ ಬಂಧಿತರು. ಕರ್ನಾಟಕದಲ್ಲಿ ಮೂರು ಸೇರಿ ಈ ಮೂವರ ವಿರುದ್ಧ ದೇಶದ ವಿವಿಧ ಠಾಣೆಗಳಲ್ಲಿ 27 ಕೇಸ್ ದಾಖಲಾಗಿದೆ. ಕಮಿಷನ್ ಆಸೆ ಹುಟ್ಟಿಸಿ ಬ್ಯಾಂಕ್ ನಲ್ಲಿ ಕರೆಂಟ್ ಅಕೌಂಟ್ ತೆರೆದು ಕೊಡುವಂತೆ ಇಬ್ಬರಿಗೂ ಸರ್ವೇಶ್ ಪ್ರಚೋದನೆ ಮಾಡುತ್ತಿದ್ದ.



ಕಂಪನಿಗಳ ಹೆಸರಿನಲ್ಲಿ ಬ್ಯಾಂಕ್ಗೆ ನಕಲಿ ದಾಖಲೆ ಕೊಟ್ಟು ಕರೆಂಟ್ ಅಕೌಂಟ್ ತೆರೆಯುತ್ತಿದ್ದ ರೋಹನ್ ಮತ್ತು ಅನಿಲ್ ಅವುಗಳನ್ನು ಸರ್ವೇಶ್ ಮೂಲಕ ಸೈಬರ್ ವಂಚಕರಿಗೆ ಪೂರೈಸುತ್ತಿದ್ದರು. ಈ ಬ್ಯಾಂಕ್ ಖಾತೆಗಳ ಪಾಸ್ ಬುಕ್, ಅಕೌಂಟ್ ನಂಬರ್, ಎಟಿಎಂ ಕಾರ್ಡ್ ಗಳನ್ನು ಸರ್ವೇಶ್ ಗೆ ನೀಡಿದ್ದರು. ಇವರು ಮಾಡಿಕೊಡುತ್ತಿದ್ದ ಬ್ಯಾಂಕ್ ಅಕೌಂಟ್ ಗಳನ್ನು ಸರ್ವೇಶ್ ಸೈಬರ್ ವಂಚಕರಿಗೆ ನೀಡಿದ್ದ.
ಸೈಬರ್ ವಂಚಕರು ಅಮಾಯಕರ ಖಾತೆಗಳನ್ನು ಹ್ಯಾಕ್ ಮಾಡಿ, ಅದರಲ್ಲಿರುವ ಹಣವನ್ನು ಇವರು ಕೊಡುತ್ತಿದ್ದ ಅಕೌಂಟ್ಗೆ ವರ್ಗಾಯಿಸಿಕೊಳ್ತಿದ್ದರು. ಬಳಿಕ ಈ ಹಣವನ್ನು ಬೇರೆ ಬೇರೆ ಅಕೌಂಟ್ಗೆ ವರ್ಗಾವಣೆ ಮಾಡುತ್ತಿದ್ದುದು, ಹಣವನ್ನು ವಿತ್ ಡ್ರಾ ಮಾಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿದೆ. ಇವರ ಖಾತೆಯಲ್ಲಿ ಒಂದು ಕೋಟಿ ಹಣ ವರ್ಗಾವಣೆಯಾದಲ್ಲಿ 60 ಸಾವಿರ ಕಮಿಷನ್ ನೀಡುವುದಾಗಿ ಅನಿಲ್ ಮತ್ತು ರೋಹನ್ಗೆ ಆಮಿಷ ಒಡ್ಡಲಾಗಿತ್ತು. 10 ಕೋಟಿಗೂ ಅಧಿಕ ಹಣ ಬೆಳಗಾವಿಯಲ್ಲಿದ್ದ ವಂಚಕರ ಖಾತೆಗೆ ಬಂದಿರುವ ಶಂಕೆಯಿದ್ದು ಮೂವರನ್ನೂ ಪೊಲೀಸರು ಬಂಧಿಸಿ ಚೆನ್ನೈಗೆ ಕರೆದೊಯ್ದಿದ್ದಾರೆ.
Three individuals have been arrested by Chennai police in Belagavi for providing fake bank accounts to cyber fraudsters. The accused allegedly facilitated fraudulent transactions running into crores by supplying fake documents to open bank accounts on behalf of cybercriminals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am