ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm