ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm