ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am