ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm