ಬ್ರೇಕಿಂಗ್ ನ್ಯೂಸ್
30-07-25 10:42 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 30 : ನಗರದ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ವ್ಯಾಲೆಟ್ ಹ್ಯಾಕ್ ಮಾಡಿರುವ ಸೈಬರ್ ವಂಚಕರು, 378 ಕೋಟಿ ರೂ ಅಂದ್ರೆ ಸುಮಾರು 44 ಮಿಲಿಯನ್ ಅಮೆರಿಕನ್ ಡಾಲರ್ ಲೂಟಿ ಮಾಡಿದ್ದಾರೆ. ಈ ಕುರಿತು ಕಂಪನಿಯ ಉಪಾಧ್ಯಕ್ಷ ಹರ್ದೀಪ್ ಸಿಂಗ್ ನೀಡಿರುವ ದೂರಿನ ಆಧಾರದಲ್ಲಿ ವೈಟ್ಫೀಲ್ಡ್ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮ್ಮ ಉದ್ಯೋಗಿರಾಹುಲ್ ಅಗರ್ವಾಲ್ ಎಂಬವರಿಗೆ ಕೆಲಸ ಮಾಡಲು ಕಂಪನಿ ಲ್ಯಾಪ್ಟಾಪ್ ನೀಡಿತ್ತು. ಸೈಬರ್ ಕಳ್ಳರು ಈ ಲ್ಯಾಪ್ಟಾಪ್ನ ವ್ಯಾಲೆಟ್ ಹ್ಯಾಕ್ ಮಾಡಿದ್ದಾರೆ.
ಇಷ್ಟು ದೊಡ್ಡ ಮೊತ್ತ ವಂಚನೆಯಾಗಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿ ಆಂತರಿಕ ತನಿಖೆ ನಡೆಸಿದೆ. ಈ ವೇಳೆ, ರಾಹುಲ್ ಅಗರ್ವಾಲ್ ಅವರು ಕಂಪನಿ ಲ್ಯಾಪ್ಟಾಪ್ ಅನ್ನು ಮತ್ತೊಂದು ಪಾರ್ಟ್ಟೈಂ ಉದ್ಯೋಗಕ್ಕೆ ಬಳಸಿರುವುದು ಗೊತ್ತಾಗಿದೆ. ಕಳೆದ ಒಂದು ವರ್ಷದಿಂದ ಪಾರ್ಟ್ಟೈಮ್ ಉದ್ಯೋಗದ ಮೂಲಕ ಅಗರ್ವಾಲ್ 15 ಲಕ್ಷ ರೂ ಸಂಪಾದಿಸಿರುವುದೂ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈತನೇ ಬೇರೆ ವ್ಯಕ್ತಿಗಳೊಂದಿಗೆ ಸೇರಿ ಈ ವಂಚನೆ ಎಸಗಿರುವ ಸಾಧ್ಯತೆ ಇದೆ ಎಂದು ಕಂಪನಿ ದೂರಿನಲ್ಲಿ ತಿಳಿಸಿದೆ.
"ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ರಾಹುಲ್ ಅಗರ್ವಾಲ್ ಕಳೆದ ಐದಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಆತನ ಲ್ಯಾಪ್ಟಾಪ್ನಿಂದ ಕಂಪನಿಯ ಕ್ರಿಪ್ಟೋ ಕರೆನ್ಸಿ ವರ್ಗಾವಣೆಯಾಗಿರುವ ಕಾರಣ ಆತನನ್ನು ವಶಕ್ಕೆ ಪಡೆಯಲಾಗಿದೆ. ಸೈಬರ್ ವಂಚನೆ ಪ್ರಕರಣದಲ್ಲಿ ಆತನ ಕೈವಾಡವಿದೆಯೇ ಎಂಬ ಕುರಿತು ತನಿಖೆ ನಡೆಯುತ್ತಿದೆ" ಎಂದು ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದರು.
In a shocking case of cyber fraud, Nebilo Technologies Private Limited, a cryptocurrency trading company based in Bellandur, Bengaluru, reported a theft of approximately ₹378 crore (around 44 million US dollars) from its crypto wallet. The fraud came to light following an internal investigation, and a formal complaint has been lodged at the Whitefield Cyber Crime Police Station based on a report filed by the company’s Vice President, Hardeep Singh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am