ಬ್ರೇಕಿಂಗ್ ನ್ಯೂಸ್
31-07-25 06:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿತ ಯುವಕನಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಂಗಳೂರು ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ 16 ವರ್ಷದ ಬಾಲಕಿಯನ್ನು ಸಜಿಪ ನಡು ಗ್ರಾಮದ ಆರೋಪಿ ಮನ್ಸೂರ್ @ ಮೊಹಮ್ಮದ್ ಮನ್ಸೂರ್ @ ಜಾಬೀರ್ ಎಂಬಾತ ಅತ್ಯಾಚಾರಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. 2023ರ ಮೇ 30ರಂದು ಅಪ್ರಾಪ್ತ ನೊಂದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬೆದರಿಸಿ ವಿಡಿಯೋ ಮಾಡಿರುತ್ತಾನೆಂದು ನೊಂದ ಬಾಲಕಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಅ.ಕ್ರ 128/2023 ಕಲಂ: 363, 376(2)(ಎನ್), 376(3), 506 ಐಪಿಸಿ & ಕಲಂ: 6 ಪೋಕ್ಸೋ ಕಾಯಿದೆ ರೀತ್ಯ 2023 ರ ಡಿ.23ರಂದು ಪ್ರಕರಣ ದಾಖಲಾಗಿತ್ತು.
ಆರೋಪಿ ಮನ್ಸೂರ್ ಪ್ರಕರಣ ದಾಖಲಾದ ಬೆನ್ನಲ್ಲೇ ಎಂಟು ತಿಂಗಳ ಕಾಲ ತಲೆಮರೆಸಿದ್ದು, 2024ರ ಜುಲೈ 2 ರಂದು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ತನಿಖೆ ಕೈಗೊಂಡ ಮಹಿಳಾ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಗುರುರಾಜ್ ಭಾಗಶಃ ತನಿಖೆಯನ್ನು ಪೂರೈಸಿದ್ದು, ಪ್ರಕರಣದಲ್ಲಿ ಮುಂದಿನ ತನಿಖೆಯನ್ನು ರಾಜೆಂದ್ರ ಬಿ. ಅವರು ಕೈಗೊಂಡಿದ್ದರು. ಪೂರಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನಿಗದಿತ ಸಮಯದ ಒಳಗಾಗಿ ತನಿಖೆಯನ್ನು ಪೂರೈಸಿ ಆರೋಪಿ ವಿರುದ್ಧ ದೋಷರೋಪಣಾ ಪತ್ರ ಸಲ್ಲಿಸಲಾಗಿತ್ತು.
ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-2 (ಪೋಕ್ಸೋ ) ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಸರಕಾರಿ ಅಭಿಯೋಜಕರು ಬದ್ರಿನಾಥ ಮತ್ತು ವಿಶೇಷ ಸರಕಾರಿ ಅಭಿಯೋಜಕರು ಶ್ರೀಮತಿ ಸಹನಾದೇವಿ ಬೋಳೂರು ಸರಕಾರದ ಪರವಾಗಿ ವಾದ ಮಂಡಿಸಿದ್ದರು. ಜುಲೈ 30ರಂದು ನ್ಯಾಯಾಧೀಶ ಮಾನು ಕೆ.ಎಸ್ ಆರೋಪಿತನಿಗೆ ಬಾಲಕಿಯ ಅತ್ಯಾಚಾರದ ಆರೋಪದ ಅಡಿಯಲ್ಲಿ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು ರೂಪಾಯಿ 50,000/- ದಂಡ ವಿಧಿಸಿದ್ದಾರೆ. ಮತ್ತು ಬೆದರಿಕೆ ನೀಡಿರುವುದಕ್ಕಾಗಿ ಪ್ರಕರಣದಲ್ಲಿ ಆರೋಪಿತನಿಗೆ 5,000/ ದಂಡ ಮತ್ತು 1 ವರ್ಷ ಶಿಕ್ಷೆಯನ್ನು ವಿಧಿಸಿದ್ದಾರೆ.
A Special POCSO Court in Mangaluru has sentenced a youth to 20 years of rigorous imprisonment for sexually assaulting a minor and using video footage of the act to intimidate her.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am