ಬ್ರೇಕಿಂಗ್ ನ್ಯೂಸ್
06-08-25 11:04 am Udupi Correspondent ಕ್ರೈಂ
ಉಡುಪಿ, ಆ.6 : ಮನೆಗಳ್ಳತನ ಸೇರಿದಂತೆ ಹಲವೆಡೆ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಕಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕಿನ ಉಪ್ಪಳ್ಳಿ ನಿವಾಸಿ ಕೆ.ಇ.ಮೊಹಮ್ಮದ್ ಬಂಧಿತ ಆರೋಪಿ. ಈತನಿಂದ ಒಟ್ಟು 182 ಗ್ರಾಂ ಚಿನ್ನದ ಗಟ್ಟಿಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜೂ.27 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಕುಖ್ಯಾತ ಕಳ್ಳತನ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಎಂಬಾತನನ್ನು ಬಂಧಿಸಲಾಗಿತ್ತು, ಬಂಧಿತ ಆರೋಪಿಯನ್ನು ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವ ಚಿನ್ನ ಮತ್ತು ಈ ಹಿಂದೆಯೂ ಕೆಲವು ಪ್ರಕರಣಗಳಲ್ಲಿ ಕಳವುಗೈದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಉಪ್ಪಳ್ಳಿಯ ಕೆ.ಇ.ಮೊಹಮ್ಮದ್ಗೆ ನೀಡಿರುವುದಾಗಿ ಬಗ್ಗೆ ಮಾಹಿತಿ ನೀಡಿದ್ದ. ಇದರಂತೆ ಕೆ.ಇ.ಮೊಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ, ಪಡುಬಿದ್ರಿ ಹಾಗೂ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿರುವ ಚಿನ್ನದ ಗಟ್ಟಿಗಳನ್ನು ಮೊಹಮ್ಮದ್ ತನ್ನ ಬಳಿ ಇರಿಸಿಕೊಂಡು ಅವನ್ನು ಕರಗಿಸಿ ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಉಡುಪಿ ಪೊಲೀಸ್ ಜಿಲ್ಲಾ ಅಧೀಕ್ಷಕ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್.ನಾಯ್ಕ, ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ನೇತೃತ್ವದಲ್ಲಿ ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್.ಮಾನೆ ನೇತೃತ್ವದ ತಂಡ ಪತ್ತೆ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ ದಸ್ತಗಿರಿ ಮಾಡಿದ ಆರೋಪಿ ಇತ್ತೆ ಬರ್ಪೆ ಅಬೂಬಕರ್ ಮತ್ತು ಸದ್ರಿ ಆರೋಪಿ ಕೆ.ಇ.ಮೊಹಮ್ಮದ್ ಅವರಿಂದ ಒಟ್ಟು 22.32 ಲಕ್ಷ ರೂ. ಮೌಲ್ಯದ 248.760 ಗ್ರಾಂ ತೂಕದ ಚಿನ್ನಾಭರಣ ಮತ್ತು ಚಿನ್ನದ ಗಟ್ಟಿಗಳನ್ನು ವಶಪಡಿಸಲಾಗಿದೆ.
Udupi police have arrested a man for aiding burglars in selling stolen gold by melting it and turning it into solid gold bars. The arrested individual has been identified as K.E. Mohammed, a resident of Uppalli in Udupi taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am