ಬ್ರೇಕಿಂಗ್ ನ್ಯೂಸ್
07-08-25 08:59 pm Bangalore Correspondent ಕ್ರೈಂ
ಬೆಂಗಳೂರು, ಆ.7: ಸೈಬರ್ ಖದೀಮರು ಪೊಲೀಸರ ಸೋಗಿನಲ್ಲಿ ವೃದ್ಧ ವ್ಯಕ್ತಿಯನ್ನು ಒಂದು ವಾರ ಕಾಲ ಡಿಜಿಟಲ್ ಬಂಧನದಲ್ಲಿಟ್ಟು ಬರೋಬ್ಬರಿ 1.77 ಕೋಟಿ ರೂ. ಲಪಟಾಯಿಸಿದ್ದಾರೆ. ವಂಚನೆಗೆ ಒಳಗಾದ ಜಿ.ವಸಂತ್ ಕುಮಾರ್ (81) ಎಂಬವರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದಾನಂದ ನಗರ ಬಳಿಯ ಎನ್ಜಿಇಎಫ್ ಲೇಔಟ್ ನಿವಾಸಿಯಾದ ವಸಂತ್ಕುಮಾರ್ ಅವರಿಗೆ ಸಂದೀಪ್ ಜಾಧವ್ ಎಂಬಾತ ಜುಲೈ 5ರಂದು ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿದ್ದ. ತಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಬ್ಯಾಂಕ್ ಖಾತೆ ತೆರೆಯಲಾಗಿದೆ. ಜೆಟ್ ಏರ್ವೇಸ್ನ ನರೇಶ್ ಗೋಯಲ್ ಎಂಬಾತನ ಹೆಸರಿಗೆ ತಮ್ಮ ಬ್ಯಾಂಕ್ ಖಾತೆಯಿಂದ ಹಣದ ಅಕ್ರಮ ವರ್ಗಾವಣೆಯಾಗಿದೆ ಎಂದು ವಸಂತ್ ಕುಮಾರ್ ಅವರನ್ನು ಹೆದರಿಸಿದ್ದ. ಬಳಿಕ ಕೆಲ ವ್ಯಕ್ತಿಗಳು ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ವಸಂತ್ ಕುಮಾರ್ ಅವರಿಗೆ ಕರೆ ಮಾಡಿ, ಜುಲೈ 9ರಿಂದ 15ರ ವರೆಗೆ ಡಿಜಿಟಲ್ ಅರೆಸ್ಟ್ ಎಂದು ಹೇಳಿ ಹೆದರಿಸಿದ್ದರು. ಅಲ್ಲದೆ, ವಾಟ್ಸಾಪ್ ವಿಡಿಯೊ ಕರೆಯ ಮೂಲಕ ನಕಲಿ ಬಂಧನ ವಾರಂಟ್ ತೋರಿಸಿ ಬೆದರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನದ ವಾರಂಟ್ ನೋಡಿ ಭಯಬಿದ್ದ ವಸಂತ್ ಕುಮಾರ್, ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ವಂಚಕರಿಗೆ ಕೊಟ್ಟುಬಿಟ್ಟಿದ್ದರು. ನಂತರ ವಂಚಕರು, ತನಿಖೆ ಉದ್ದೇಶಕ್ಕೆ ತಮ್ಮ ಖಾತೆಯಲ್ಲಿನ ಹಣವನ್ನು ಬೇರೊಂದು ಖಾತೆಗೆ ವರ್ಗಾಯಿಸಬೇಕೆಂದು ವಸಂತ್ ಅವರಿಗೆ ಸೂಚಿಸಿದ್ದರು. ಹೀಗಾಗಿ, ವಸಂತ್ ಕುಮಾರ್ ತಮ್ಮ ಬ್ಯಾಂಕ್ ಖಾತೆಯಿಂದ ವಂಚಕರು ಸೂಚಿಸಿದ ಖಾತೆಗಳಿಗೆ ಹಂತ ಹಂತವಾಗಿ ಆರ್ಟಿಜಿಎಸ್ ಮೂಲಕ 1.77 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ವಂಚಕರು ಅವರ ಸಂಪರ್ಕಕ್ಕೆ ಸಿಗದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
In a recent case of cybercrime, an 81-year-old retired man from Bengaluru has been a victim of a growing digital arrest scam. He has lost Rs 1.77 crore to fraudsters who tricked him with a fake “digital arrest” over 10 days. The senior citizen, who lives in Sadananda Nagar (NGEF Layout), filed a complaint with the East CEN police on July 23 after realising he had been scammed.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm