ಬ್ರೇಕಿಂಗ್ ನ್ಯೂಸ್
13-08-25 04:14 pm HK News Desk ಕ್ರೈಂ
ಬೆಳಗಾವಿ, ಆ.13 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೆಸರಲ್ಲಿ ನಕಲಿ ಸಹಿ ಮಾಡಿರುವ ದಾಖಲೆ ಸೃಷ್ಟಿಸಿ ಉದ್ಯೋಗ ನೀಡುವುದಾಗಿ ಹೇಳಿ ಹಲವರಿಂದ ಕೋಟ್ಯಾಂತರ ರುಪಾಯಿ ಪಡೆದು ವಂಚಿಸಿರುವ ಬಗ್ಗೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರೇ ತಮ್ಮ ಸಹ ನಕಲಿ ಮಾಡಿ ಸೃಷ್ಟಿಸಿರುವ ಸುಳ್ಳು ದಾಖಲೆಗಳ ಸಮೇತ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತನಿಖೆ ಕೈಗೊಳ್ಳುವಂತೆ ದೂರು ನೀಡಿ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೇ ಲಕ್ಷಾಂತರ ರು. ಹಣ ಕಳೆದುಕೊಂಡು ವಂಚನೆಗೆ ಒಳಗಾದವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಮಂಜುನಾಥ ಮಲ್ಲಸರ್ಜ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಾಳ ಗ್ರಾಮದ ವಿಠಲ ಪಡದಪ್ಪನವರ ಎಂಬಾತ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೆಳಗಾವಿಯ ದಾಸ್ತಿಕೊಪ್ಪ ಗ್ರಾಮದ ಮಂಜುನಾಥ ಮಲ್ಲಸರ್ಜ ಎಂಬಾತ ನೌಕರಿ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಾರೆ ಎಂದು ದೂರಿದ್ದಾರೆ. ಕಾವ್ಯಾ ಯಳ್ಳೂರು ಎಂಬವರು ಕೂಡ ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮಂಜುನಾಥ ಮಲ್ಲಸರ್ಜ ಎಂವಾತ 15ಕ್ಕೂ ಅಧಿಕ ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ಹುದ್ದೆ ಭರ್ತಿ ಮಾಡುವುದಾಗಿ ಹೇಳಿ ಸುಮಾರು 32 ಲಕ್ಷ ರು. ವಂಚನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ತನಿಖೆಗೆ ಸಚಿವೆ ಹೆಬ್ಬಾಳ್ಳರ್ ಆಗ್ರಹ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ತಮ್ಮ ಹಾಗೂ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಸಹಿ ಮಾಡಿ ಹಣ ವಸೂಲಿ ಮಾಡಿರುವ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ದಾಖಲೆ ಸಹಿತ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆಯಾದ ನನ್ನ ಹಾಗೂ ಇಲಾಖೆಯ ಅಧಿಕಾರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕೆಲ ವ್ಯಕ್ತಿಗಳು ಹಣ ವಸೂಲು ಮಾಡಿದ್ದು ಬೆಳಕಿಗೆ ಬಂದಿದೆ. ಈ ಕುರಿತು ಸಾಕ್ಷ್ಯಾಧಾರಗಳನ್ನು ನೀಡಿದ್ದೇನೆ. ನಕಲಿ ಸಹಿ ಮಾಡಿ ನೇಮಕಾತಿ ಆದೇಶ ವಿತರಿಸಿದ್ದು ಪ್ರಕರಣದ ಕುರಿತು ತನಿಖೆ ಕೈಗೊಳ್ಳುವಂತೆ ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೆದ್ ಅವರಿಗೆ ಮನವಿ ಮಾಡಿದ್ದಾರೆ.
A major fraud case has been registered at Kittur Police Station, where miscreants allegedly forged documents using the name and fake signature of Women and Child Development Minister Laxmi Hebbalkar and Governor Thawar Chand Gehlot, promising government jobs and collecting crores of rupees from several individuals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am