ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm