ಬ್ರೇಕಿಂಗ್ ನ್ಯೂಸ್
14-08-25 05:31 pm Bangalore Correspondent ಕ್ರೈಂ
ಬೆಂಗಳೂರು, ಆ 14 : ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ನನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್ ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ ಸುದ್ದಿ ಬಂದಿತ್ತು. ಆದರೆ ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಅಪಾರ್ಟ್ಮೆಂಟ್ಗೆ ತೆರಳಿ ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎರಡನೇ ಆರೋಪಿ. ಮೊದಲ ಆರೋಪಿ ಪವಿತ್ರಾ ಗೌಡಳನ್ನ ಈ ಮೊದಲೇ ಪೊಲೀಸರು ಅರೆಸ್ಟ್ ಮಾಡಿದ್ದರು.
ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗುತ್ತಿದೆ. ಬಳಿಕ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತೆ. ಬಳಿಕ ಅವರನ್ನು ಜೈಲಿಗೆ ಕಳುಹಿಸಲಾಗುತ್ತೆ. ಆದರೆ, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸುತ್ತಾರೋ? ಇಲ್ಲವೋ ಬಳ್ಳಾರಿ ಜೈಲಿಗೆ ಕರೆದುಕೊಂಡು ಹೋಗುತ್ತಾರೋ? ಅನ್ನೋದು ಗೊತ್ತಾಗಬೇಕಿದೆ.
ಸಾಮಾನ್ಯವಾಗಿ ಜಾಮೀನು ರದ್ದು ಆದರೆ, ಆರೋಪಿಗಳಿಗೆ ನ್ಯಾಯಾಲಯ ಒಂದು ವಾರ, 10 ದಿನ ಹೀಗೆ ಪೊಲೀಸರಿಗೆ ಶರಣಾಗುವುದಕ್ಕೆ ಅವಕಾಶ ನೀಡುತ್ತೆ. ಆದರೆ, ದರ್ಶನ್ ಕೇಸ್ನಲ್ಲಿ ಹಾಗೆ ಆಗಲಿಲ್ಲ. ಸುಪ್ರೀಂ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯನ್ನು ತತಕ್ಷಣವೇ ಬಂಧಿಸಬೇಕು ಎಂದು ಆದೇಶ ನೀಡಿತ್ತು. ದರ್ಶನ್ ಕೇಸ್ನಲ್ಲಿ ಸುಪ್ರೀಂ ಕೋರ್ಟ್ ಯಾಕಿಷ್ಟು ಕಟುವಾದ ನಿರ್ಧಾರ ತೆಗೆದುಕೊಳ್ತು? ಅನ್ನೋದನ್ನು ವಕೀಲರು ರಿವೀಲ್ ಮಾಡಿದ್ದಾರೆ.
ಇನ್ನು ದರ್ಶನ್ ಬಂಧನದ ವೇಳೆ ಅಭಿಮಾನಿಗಳು ನಿವಾಸದ ಮುಂದೆ ಜಮಾಯಿಸಿದ್ದರು. ನೂಕು, ನುಗ್ಗಲು ತಪ್ಪಿಸುವ ಉದ್ದೇಶದಿಂದ ಕಾಮಾಕ್ಷಿ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡು, ದರ್ಶನ್ ಅಭಿಮಾನಿಗಳನ್ನು ಅಲ್ಲಿಂದ ಚದುರಿಸಿದ್ದಾರೆ.
Just hours after the Supreme Court cancelled his bail, Kannada actor Darshan was arrested by police in connection with the Renukaswamy murder case.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm