Mangalore Police, Drugs, Arrest: ಗಾಂಜಾ ಸೇವನೆ ; ಅಡ್ಯಾರ್, ಪಂಪ್ವೆಲ್ ಬಳಿ ಆರು ಮಂದಿ ಯುವಕರು ಸೆರೆ 

16-08-25 10:49 pm       Mangalore Correspondent   ಕ್ರೈಂ

ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್‌ ಸ್ಟ್ಯಾಂಡ್‌ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್‌ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್‌ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್‌ ಸಫ್ವಾನ್‌ (21)ನನ್ನು ಪೊಲೀಸರು ಬಂಧಿಸಿದ್ದಾರೆ.

ನೀರುಮಾರ್ಗ ಮಾಣೂರು ಕೊಲ್ಚಾರ್‌ ರೋಡ್‌ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್‌ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್‌ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್‌ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್‌ ಬಳಿಯಿಂದ ಅಡ್ಯಾರ್‌ಪದವು ನಿವಾಸಿ ಮೊಹಮ್ಮದ್‌ ಇರ್ಷಾದ್‌ (23) ಎಂಬಾತನನ್ನು ಬಂಧಿಸಲಾಗಿದೆ.

ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್‌ವೆಲ್‌ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್‌ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ

Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.