ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm