ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am