ಬ್ರೇಕಿಂಗ್ ನ್ಯೂಸ್
20-08-25 08:10 pm Mangalore Correspondent ಕ್ರೈಂ
ಮಂಗಳೂರು, ಆ.20: ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ಮಾರ್ಚ್ 29ರಂದು ರಾತ್ರಿ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆದಿತ್ತು. ದೇರಳಕಟ್ಟೆ ಪರಿಸರದಲ್ಲಿ ಹೆಚ್.ಎಮ್ ಕಾಂಪ್ಲೆಕ್ಸ್ ನ ಮುತ್ತೂಟ್ ಫೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಕೇಬಲನ್ನು ತುಂಡು ಮಾಡಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 42/2025 ಕಲಂ: 331[40], 305, 62, 13 BNS ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬವರನ್ನು ಆಗಲೇ ಬಂಧಿಸಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ನಿವಾಸಿ ಅಬ್ದುಲ್ ಲತೀಫ್ (47) ಎಂಬಾತನನ್ನು ವಶಕ್ಕೆ ಪಡೆದು ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಬ್ದುಲ್ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಠಾಣೆ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನಲ್ಲಿ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣ ದಾಖಲಾಗಿದೆ. ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
In a major breakthrough, Mangaluru CCB police have arrested a notorious Kerala-based accused in connection with an attempted robbery at Muthoot Finance in Derlakatte.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am