ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm