ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am