ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm