ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm