ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am