ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm