ಬ್ರೇಕಿಂಗ್ ನ್ಯೂಸ್
26-08-25 05:24 pm HK News Desk ಕ್ರೈಂ
ನವದೆಹಲಿ, ಆ. 26 : ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯಾಮಾರಿಸಿ ಪಂಜಾಬ್ ಮೂಲದ ಸೈಬರ್ ವಂಚಕರು ಸುಮಾರು 350 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಕಿತ್ತುಕೊಂಡ ಘಟನೆ ನಡೆದಿದ್ದು ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಪಂಜಾಬಿನಲ್ಲಿ ಬಂಧಿಸಿದ್ದಾರೆ.
ಅಮೃತಸರದಲ್ಲಿ ‘ಡಿಜಿಕಾಪ್ಸ್ ದಿ ಫ್ಯೂಚರ್ ಆಫ್ ಡಿಜಿಟಲ್’ ಹೆಸರಿನಲ್ಲಿ ಆರೋಪಿಗಳು ಕಾಲ್ ಸೆಂಟರ್ ಮಾಡಿಕೊಂಡಿದ್ದರು. 2023ರಿಂದ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿ, ಅವರ ಕಂಪ್ಯೂಟರ್, ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ಪೀಕಿಸಿದ್ದಾರೆ. ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮಾಹಿತಿ ಆಧರಿಸಿ ಸಿಬಿಐ ವಂಚಕರ ಜಾಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಗರ್ ಅಹ್ಮದ್, ಯಶ್ ಖುರಾನಾ ಮತ್ತು ಇಂದರ್ ಜೀತ್ ಸಿಂಗ್ ಬಾಲಿ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಾಲ್ ಸಾಫ್ಟ್ವೇರ್ ಬಳಸಿಕೊಂಡು ಅಮೆರಿಕದ ಪ್ರಜೆಗಳ ಕಂಪ್ಯೂಟರ್ ಮತ್ತು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದರು. ಬಳಿಕ, ಬ್ಯಾಂಕ್ನಲ್ಲಿರೋ ನಿಮ್ಮ ಹಣಕ್ಕೆ ತೊಂದರೆ ಇದೆ, ಕ್ರಿಪ್ಟೋ ಕರೆನ್ಸಿಗೆ ವರ್ಗಾಯಿಸಿ ಎಂದು ಹೇಳುತ್ತಿದ್ದರು. ಇವರದ್ದೇ ನಿಯಂತ್ರಣದಲ್ಲಿರುವ ಕ್ರಿಪ್ಟೋ ಕರೆನ್ಸಿಗೆ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸುತ್ತಿದ್ದಂತೆ ವಂಚಕರು ಅವನ್ನು ಎಗರಿಸುತ್ತಿದ್ದರು. ಅಮೆರಿಕದಿಂದ 40 ಮಿಲಿಯನ್ ಯುಎಸ್ ಡಾಲರ್ (350 ಕೋಟಿ ರು.) ಮೊತ್ತವನ್ನು ಕಿತ್ತುಕೊಂಡಿರುವ ಆರೋಪ ಇದೆ.
ಬಂಧಿತರಿಂದ 54 ಲಕ್ಷ ರೂ., ಎಂಟು ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಲಾಗಿದೆ. ಆ.18 ರಂದು ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಅಮೃತಸರ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಅಮೃತಸರದ ಕಾಲ್ ಸೆಂಟರ್ ನಲ್ಲಿ 30 ಜನರು ಇದೇ ರೀತಿಯ ವಂಚನೆ ಕೆಲಸದಲ್ಲಿ ತೊಡಗಿದ್ದರು ಎಂಬ ಮಾಹಿತಿಯಿದ್ದು ಸಿಬಿಐ ಕಾರ್ಯಾಚರಣೆ ಮುಂದುವರಿಸಿದೆ.
In a major international cybercrime bust, the Central Bureau of Investigation (CBI) has arrested three individuals from Punjab for allegedly scamming American citizens out of over ₹350 crore (approximately USD 40 million) over a span of two years
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am