ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm