ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm