ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am