ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm